4:47 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಆ.10: ಕಲಾಸಾಧನದಿಂದ ‘ಸ್ವರಧಾರ’ ಸಂಗೀತ ಉತ್ಸವ

08/08/2025, 22:16

ಮಂಗಳೂರು(reporterkarnataka.com): ಮಂಗಳೂರು ಕಲಾ ಸಾಧನ ವತಿಯಿಂದ
ಸ್ವರಧಾರಾ ಸಂಗೀತ ಉತ್ಸವ ಆ.10ರಂದು ಸಂಜೆ 5 ಗಂಟೆಯಿಂದ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ನಡೆಯಲಿದೆ.
ಉತ್ಸವದಲ್ಲಿ ಪ್ರಸಿದ್ಧ ಹಿಂದೂಸ್ತಾನಿ ಗಾಯಕ ಸಂಗೀತ ನಾಟಕ ಅಕಾಡೆಮಿ ನವದೆಹಲಿಯಿಂದ ಭಾರತರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್, ಯುವ ಪುರಸ್ಕಾರ ಪಂಡಿತ್ ಕುಮಾರ್ ಮರ್ದೂರ್ ಭಾಗವಹಿಸಲಿದ್ದಾರೆ. ಕುಮಾರ್ ಅವರು ಕಿರಾಣಾ, ಗ್ವಾಲಿಯರ್ ಮತ್ತು ಜೈಪುರ ಘರಾಣೆಗಳ ಶೈಲಿಗಳನ್ನು ಬೆರೆಸಿ ತಮ್ಮದೇ ಆದ ಗಾಯನವನ್ನು ರಚಿಸಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದವರು. ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಸೋಮನಾಥ ಮರ್ದೂರರ ಫುತ್ರ.


ಕುಮಾರ್ 2011ರಿಂದ 2021 ರವರೆಗೆ 10 ವರ್ಷಗಳ ಕಾಲ ಕೋಲ್ಕತ್ತಾದ ಐಟಿಸಿ-ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಬೋಧನಾ ಅಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅಮೆರಿಕ ಸಂಯುಕ್ತ ಸಂಸ್ಥಾನ, ಕೆನಡಾ, ಸಿಂಗಾಪುರ, ಬಾಂಗ್ಲಾ ದೇಶಗಳಲ್ಲಿ ಕಾರ್ಯ ನೀಡಿ ಖ್ಯಾತಿ ಪಡೆದವರು. ಉತ್ಸವದಲ್ಲಿ ಅಕ್ಷಯ ಜೋಶಿ ಧಾರವಾಡ್ ತಬಲಾ ಮತ್ತು ಸತೀಶ್ ಭಟ್ ಹೆಗ್ಗಾರ್ ಹಾರ್ಮೊನಿಯಂ ಸಾಥ್ ನೀಡಲಿದ್ದಾರೆ ಎಂದು ಕಲಾ ಸಾಧನ ಕೇಂದ್ರದ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೆರವೇರಿಸಲಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು