ಇತ್ತೀಚಿನ ಸುದ್ದಿ
ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ
09/08/2025, 20:19
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.














