3:24 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mysore | ಬಂಡೀಪುರ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ: ಕಾಲಿನಡಿಗೆ ಸಿಲುಕಿಯೂ ಪಾರಾದ ಪ್ರವಾಸಿಗ!; ವೀಡಿಯೋ ವೈರಲ್

11/08/2025, 12:46

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಮುಂದಾದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿಯಲು ಯತ್ನಿಸಿದ ಘಟನೆ ಬಂಡೀಪುರದ ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.


ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿದೆ. ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ಆನೆ ನಿಂತಿದ್ದು, ಈ ವೇಳೆ ಪ್ರವಾಸಿಗ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾನೆ.
ಈ ವೇಳೆ ಆನೆ ಪ್ರವಾಸಿಗನನ್ನು ಓಡಿಸಿಕೊಂಡು ಹೋಗಿದ್ದು, ಕೆಲಕಾಲ ಅಟ್ಟಾಡಿಸಿದೆ. ಓಡುವ ವೇಳೆ ಪ್ರವಾಸಿಗ ಕಾಲು ಜಾರಿ ಬಿದ್ದಿದ್ದು, ಆನೆಯ ಕಾಲಿನ ಕೆಳಗೆ ಸಿಲುಕಿಕೊಂಡಿದ್ದಾನೆ. ಬಳಿಕ ಆನೆ ತುಳಿಯಲು ಯತ್ನಿಸಿ ಸ್ಥಳದಿಂದ ಹೊರಟು ಹೋಗಿದೆ. ಪರಿಣಾಮ ಅದೃಷ್ಟವಶಾತ್ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಡಿಯೋ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು