12:36 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕನ್ನಡ ಜಾನಪದ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಬೇಕಲ್ ನೇಮಕ

13/08/2025, 22:17

ಕಾಸರಗೋಡು(reporterlarnataka.com): ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ ಇವರು ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಜಾನಪದ ವಿದ್ವಾಂಸರು, ಕಲಾವಿದರು, ಜಾನಪದ ಕಲಾ ಕಾಯಕ ಯೋಗಿಗಳು, ತಂಡಗಳು, ಆಸಕ್ತ ಜಾನಪದ ವ್ಯಕ್ತಿಗಳು ಡಾ. ವಾಮನ್ ರಾವ್ ಬೇಕಲ್, ಅಧ್ಯಕ್ಷರು, ಕನ್ನಡ ಜಾನಪದ ಪರಿಷತ್ತು, ಕನ್ನಡ ಭವನ ಸಂಕೀರ್ಣ, ನುಳ್ಳಿಪ್ಪಾಡಿ, ಕಾಸರಗೋಡು 671121.ಮೊ. 9633073400,ಈ ವಿಳಾಸದಲ್ಲಿ ಸಂಪರ್ಕಿಸಬೇಕಾಗಿ ವಿನಂತಿ.
ಸದ್ಯದಲ್ಲಿಯೇ ಉದ್ಘಾಟನೆ ಗೊಳ್ಳಲಿರುವ ಕನ್ನಡ ಜಾನಪದ ಪರಿಷತ್ತು ಕಾಸರಗೋಡು ಘಟಕದ ಆಯ್ದ ಆಸಕ್ತರ ಸಮಿತಿಯಲ್ಲಿ ಸೇರ್ಪಡೆಗೊಳ್ಳಲು ಇಚ್ಚಿಸುವ ಜಾನಪದ ಕಾಯಕ ಯೋಗಿಗಳು 9633073400ಈ ಸಂಖ್ಯೆಯಲ್ಲಿ ಸಂಪರ್ಕಿಸಬೇಕು.
ಉದ್ಘಾಟನಾ ಸಮಾರಂಭದಲ್ಲಿ 10 ಮಂದಿ ಜಾನಪದ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮೇರು ವ್ಯಕ್ತಿತ್ವಗಳನ್ನು “ಜಾನಪದ ಕುಲ ಪುರಸ್ಕಾರ “ಪ್ರಶಸ್ತಿ ಹಾಗೂ 5 ತಂಡಗಳಿಗೆ “ಜಾನಪದ ಕುಲ ಸಾಧಕ ಪ್ರಶಸ್ತಿ “ನೀಡಿ ಗೌರವಿಸಲಿದೆ. ಇದಕ್ಕೆ ಸಂಬಂಧ ಪಟ್ಟ ದಾಖಲೆಯೊಂದಿಗೆ ಡಾ. ವಾಮನ್ ರಾವ್ ಬೇಕಲ್ ಅವರನ್ನು ವಾಟ್ಸಪ್ ಮೂಲಕ ಸಂಪರ್ಕಿಸಬೇಕೆಂದು ಕನ್ನಡ ಜಾನಪದ ಪರಿಷತ್ತು ಹಾಗೂ ಕನ್ನಡ ಭವನ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು