9:33 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ಇಸ್ಕಾನ್‌ನಲ್ಲಿ ಆ.15, 16ರಂದು ಜನ್ಮಾಷ್ಟಮಿ ಸಂಭ್ರಮ: ಆಳ್ವಾಸ್ ನ 300 ಮಂದಿ ಕಲಾವಿದರಿಂದ ಶ್ರೀಕೃಷ್ಣ ವೈಭನ

13/08/2025, 22:47

ಮಂಗಳೂರು(reporterkarnataka.com): ನಗರದ ಕೋಡಿಯಲ್‌ಬೈಲ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರ, ಇಸ್ಕಾನ್‌ನಲ್ಲಿ ಆ.15 ಮತ್ತು 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮದಾಸ ಹೇಳಿದರು.
ಅವರು ಇಂದು ನಗರದ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಆ.15 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಣ್ಣ, ಉಯ್ಯಾಲೆ ಸೇವೆಗಳು, ಧಾರ್ಮಿಕ ಕಾರ್ಯಕ್ರಮಗಳು, ಮಹಾಭಿಷೇಕ, ಭಜನೆ, ಆಧ್ಯಾತ್ಮಿಕ ಪ್ರಮಚನಗಳು ನಡೆಯಲಿವೆ ಎಂದರು.
ಆ.16ರಂದು ಮಧ್ಯಾಹ್ನದ ಬಳಿಕ ಶಾರದಾ ವಿದ್ಯಾಲಯ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಬ್ಬದ ಫುಡ್ ಸ್ಟಾಲ್, ಭಕ್ತಿಗೀತೆ, ರಸಮಂಜರಿ ನಡೆಯಲಿದ್ದು, ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾಸಂಸ್ಥೆಯಿಂದ 300 ಜನ ಕಲಾವಿದರನ್ನು ಒಳಗೊಂಡಂತೆ ಶ್ರೀಕೃಷ್ಣ ವೈಭನ ಕಾರ್ಯಕ್ರಮ 2 ಗಂಟೆಗಳ ಕಾಲ ನಡೆಯಲಿದೆ. ಅಂದು ಮೈದಾನದಲ್ಲಿ ಅತಿ ಎತ್ತರದ ಕೃಷ್ಣನ ಆಕೃತಿಯನ್ನು ಪ್ರದರ್ಶಿಸಲಾಗುವುದು ಎಂದ ಅವರು ಅಂದು ರಾತ್ರಿ 10 ಗಂಟೆಗೆ ಮಹಾರುದ್ರ ಅಭಿಷೇಕ, ರಾತ್ರಿ 12 ಗಂಟೆಗೆ ಮಹಾಮಂಗಳಾರತಿ ಸೇವೆ ನಡೆಯಲಿದೆ ಎಂದು ಹೇಳಿದರು.
ಇಸ್ಕಾನ್‌ನ ಉಪಾಧ್ಯಕ್ಷ ಸನಂದನ ದಾಸ, ಸಂಚಾಲಕರುಗಳಾದ ಸುಂದರ ಗೌರ ದಾಸ, ಬಿ.ಜಿ. ಮನು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು