3:15 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್

14/08/2025, 19:47

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಕುರಿತು ಪ್ರತಿಪಕ್ಷದ ನಾಯಕರು ಸದನದಲ್ಲಿ ಪ್ರಸ್ತಾಪಿಸಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ ಎಸ್ ಐಟಿ ತನಿಖೆ ನಡೆಯುತ್ತಿರುವ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.
ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ ಪ್ರಕರಣ ಕುರಿತು ಪ್ರಸ್ತಾಪಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂದೆ 164 ಹೇಳಿಕೆ ನೀಡಿದ್ದಾನೆ. ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ. ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು