1:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇಗುಲದಿಂದ 1 ಲಕ್ಷಕ್ಕೂ ಅಧಿಕ ಹಣ ಕದ್ದ ಖತರ್ನಾಕ್ ಕಳ್ಳನ ಬಂಧನ

15/08/2025, 22:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಿಂದ ಒಂದು ಲಕ್ಷಕ್ಕೂ ಅಧಿಕ ಹಣ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಸಿಸಿ ಕ್ಯಾಮರಾ ಕಣ್ಣು ತಪ್ಪಿಸಿದ್ದ ಖತರ್ನಾಕ್ ಕಳ್ಳ ರಾಮೇಶ್ವರನ ಮೂರನೇ ಕಣ್ಣಿನಲ್ಲಿ ಸಿಕ್ಕಿಬಿದ್ದಂತೆ ಆಗಿದೆ ಎಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.
ಮೊದಲಿಗೆ ರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿ ಇದ್ದಂತಹ ಮಾಧವ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿ ಪಕ್ಕದ ವೆಂಕಟರಮಣ ದೇವಸ್ಥಾನದ ಸಿಸಿ ಕ್ಯಾಮರದಲ್ಲಿ ಸೇರಿಯಾಗಿತ್ತು. ನಂತರ ರಾಮೇಶ್ವರ ದೇವಸ್ಥಾನದ ಅನ್ನ ದಾಸೋಹ ಕೊಠಡಿಯಲ್ಲಿ ಇದ್ದ ಹಣವನ್ನು ಕಳ್ಳತನ ಮಾಡಿದ್ದ. ಅಷ್ಟೇ ಅಲ್ಲದೆ ಎರಡು ಮೊಬೈಲ್ ಕೂಡ ದೋಚಿದ್ದ. ಅನ್ನ ದಾಸೋಹ ಕೊಠಡಿಯ ಹಲವು ಬಾಗಿಲುಗಳನ್ನು ಮುರಿದು ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಾಗೂ ಸಣ್ಣದೊಂದು ಕಾಣಿಕೆ ಹುಂಡಿ ಸಹ ತೆಗೆದು ಅದರಲ್ಲಿದ್ದ ಹಣ ದೋಚಿಕೊಂಡು ಪರಾರಿಯಾಗಿದ್ದ.

ಮಾಸ್ಕ್ ಧರಿಸಿ ಕಳ್ಳತನ ಮಾಡಿದ್ದ ಆ ಮಾಸ್ಕ್ ಮ್ಯಾನ್ ಯಾರು? ಎಂಬುದು ಬಾರಿ ಸಂಚಲನ ಮೂಡಿಸಿದ್ದ. ತೀರ್ಥಹಳ್ಳಿ ಪೊಲೀಸರ ಚಾಣಕ್ಷತನದಿಂದ ಮೂರು ದಿನದೊಳಗೆ ಕಳ್ಳನನ್ನು ಬಂಧಿಸಲಾಗಿದೆ. ಡಿ ವೈ ಎಸ್ ಪಿ ಅರವಿಂದ್ ಕಲಗುಂಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಿಂದಾಗಿ ಖತರ್ನಾಕ್ ಕಳ್ಳನ ಬಂಧನವಾಗಿದೆ.
ಬಂಧನವಾದ ಖತರ್ನಾಕ್ ಕಳ್ಳನಿಂದ ಎರಡು ಮೊಬೈಲ್ ಹಾಗೂ 20 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು