11:54 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನೀರುಮಾರ್ಗ ಚರ್ಚ್ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ: ಹಾಡು, ನೃತ್ಯ, ನಾಟಕ, ಮಾಂಡೊ ಸಂಭ್ರಮ

21/08/2025, 11:39

ಮಂಗಳೂರು(reporterkarnataka.com): ನಗರ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ ನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 17 ರಂದು ಭಾನುವಾರ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಅರುಣ್ ರಾಜ್ ರೊಡ್ರಿಗಸ್ ಅವರು ಸಮಾರಂಭವನ್ನು ಆ ದಿನದ ವಿಶೇಷ ಖಾದ್ಯ ಪತ್ರೊಡೆಯನ್ನು ಬಿಡಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಕೊಂಕಣಿ ಭಾಷೆಯು 1992 ಆಗಸ್ಟ್ 20ರಂದು ಭಾರತದ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳ್ಳುವ ಮೂಲಕ ಅಧಿಕೃತ ಭಾಷೆಯ ಸ್ಥಾನ ಮಾನವನ್ನು ಪಡೆಯಿತು. ನಾವು ಅದೇ ಹುಮ್ಮಸ್ಸಿನಿಂದ ಕೊಂಕಣಿ ಭಾಷೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯ ಬೇಕಾದರೆ ಕೊಂಕಣಿ ಮಾತೃ ಭಾಷಿಗರು ತಮ್ಮ ಮನೆಗಳಲ್ಲಿ ಕೊಂಕಣಿಯಲ್ಲಿಯೇ ವ್ಯವಹರಿಸುವ ಅಗತ್ಯವಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ನೀರುಮಾರ್ಗ ಚರ್ಚ್‌ ನ ಧರ್ಮಗುರು ವಂದನೀಯ ಫಾ. ಪೌಲ್ ಪಿಂಟೊ ಅವರು ಮಾತನಾಡಿ, ತಾನು ವೆಲೆನ್ಸಿಯಾ ಚರ್ಚ್ ನಲ್ಲಿ ಧರ್ಮಗುರು ಆಗಿದ್ದಾಗ 25 ವರ್ಷಗಳ ಹಿಂದೆ ಕೊಂಕಣಿ ಮಾನ್ಯತಾ ದಿನವನ್ನು ಆಚರಿಸಲು ಆರಂಭಿಸಿದ್ದೆನು. ಇದೀಗ ಈ ಆಚರಣೆ ಧರ್ಮ ಪ್ರಾಂತ್ಯ ಮಟ್ಟಕ್ಕೆ ವಿಸ್ತರಣೆಗೊಂಡಿದೆ. ಈಗ ಈ ಚರ್ಚ್‌ನಲ್ಲಿ ಆಚರಿಸುತ್ತಿದ್ದೇವೆ. ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂದೀಪ್ ಮಿಸ್ಕಿತ್ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಫೆರ್ನಾಂಡಿಸ್, ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಮ್ಯಾನೇಜರ್ ಸಿಸ್ಟರ್ ಸುಜಾತಾ, ಕಾರ್ಮೆಲ್ ಆಶ್ರಮದ ಸುಪೀರಿಯರ್ ಸಿಸ್ಟರ್ ಜೇನ್, ಮಾಧ್ಯಮ ಸಲಹೆಗಾರ ಎಲಿಯಾಸ್‌ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು. ಕಿರು ಕ್ರೈಸ್ತ ಸಮುದಾಯದ ಸಂಚಾಲಕಿ ಶಬಿತಾ ಸಲ್ದಾನ್ಹಾ ಅವರು ವಂದಿಸಿದರು. ಸವಿತಾ ಪಿರೇರಾ ಕಾರ್ಯಕ್ರಮ ನಿರೂಪಿಸಿದರು. ಈ ಸಮಾರಂಭದಲ್ಲಿ ಚರ್ಚ್ ವ್ಯಾಪ್ತಿಯ 16 ವಾರ್ಡುಗಳ ಜನರು 14 ವಿಭಾಗಗಳಲ್ಲಿ ಕೊಂಕಣಿ ಹಾಡು, ನೃತ್ಯ, ನಾಟಕ, ಮಾಂಡೊ ಮತ್ತಿತರ ವಿವಿಧ ಕೊಂಕಣಿ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕೊಂಕಣಿ ಮಾತೆ ನಿಮಗೆ ನಮ್ಮ ವಂದನೆಗಳು”ಎಂಬ ಸ್ಲೋಗನ್ ಮೊಳಗಿತು. ಕೊನೆಯಲ್ಲಿ ಸಹ ಭೋಜನದಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು