7:53 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಜಿಎಸ್‌ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್

04/09/2025, 20:12

ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.
ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು