4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

11/09/2025, 17:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಒಂದು ದಿವಸದ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಸಂಘದ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮವು ಮಂಗಳೂರು ಕೊಡಿಯಲ್ ಬೈಲ್ ಬೆಸೆಂಟ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಅಲೋಷಿಯಸ್ ಡಿಮ್ಡ್ ವಿಶ್ವವಿದ್ಯಾಲಯದ ಡಾ. ರೋಸ್ ವೀರ ಡಿಸೋಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ಉಪನಿರ್ದೇಶಕರಾದ ರಾಜೇಶ್ವರಿ ಎಚ್ ವಹಿಸಿದ್ದರು ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ, ಬೆಸೆಂಟ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಯಕ್ ರೂಪ್ ಸಿಂಗ್,ದಕ್ಷಿಣ ಕನ್ನಡ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಚಂದ್ರನಾಥ ಎಂ,ಕಾರ್ಯದರ್ಶಿ ದಿವ್ಯಕುಮಾರಿ ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಚಂದ್ರನಾಥ.ಎಂ ಚೇಳೈರು, ಕಾರ್ಯದರ್ಶಿ ರಂಜಿತಾ ತೆಂಕಮಿಜಾರು,ಖಚಾಂಚಿಯಾಗಿ ವನಿತಾ ಮಂಗಳೂರು ಉಪಾಧ್ಯಕ್ಷರಾಗಿ ಮಹಾವೀರ,ಶುಭಾಪೌಲ್,ಸಂದೀಪ್ ಪೂಜಾರಿ,ತಾಲ್ಲೂಕು ಪ್ರತಿನಿಧಿಗಳಾಗಿ ವೆಂಕಟೇಶ್, ದಾಮೋದರ್ ಎನ್, ಜುಬೇದಾ,ವಿಶಾಂತ್ ಶೆಟ್ಟಿ, ಜಯಶ್ರೀ, ಶಿಲ್ಪ, ಭರತ್ ಕುಮಾರ್, ಸುನಿಲ್ ಕುಮಾರ್ ಹಾಗೂ ಸುರೇಶ್ ಎನ್ ರವರನ್ನು ಅಯ್ಕೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ ಕಾಟಿಪಳ್ಳ ನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಕರ್ಕೇರ ಇವರನ್ನು ಸನ್ಮಾನಿಸಲಾಯಿತು ಜಿಲ್ಲೆಯಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಕ್ರಡಿಯ ರಶ್ಮಿ, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬನಾವತ್ ಮಯುಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಕಾರ್ತಿಕ್ ಡಿ.ಸಿ , ಶ್ರೀ ಸುಬ್ರಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪುನೀತ್ ಪಿ.ಜೆ ಯವರನ್ನು ಅಭಿನಂದಿಸಲಾಯಿತು ದ್ವೀತಿಯ ಪಿಯುಸಿಯಲ್ಲಿ 100% ಅಂಕ ಫಲಿತಾಂಶ ದಾಖಲಿಸಿದ 40 ಉಪನ್ಯಾಸಕರನ್ನು ಗೌರವಿಸಲಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು