6:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್

16/09/2025, 18:39

ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಶನ್ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.
ಕೆಂಪು ಕಲ್ಲು ಸಾಗಾಟಕ್ಕೆ ‘2ಡಿ’ ಎಂಬ ಹೊಸ ರಾಯಲ್ಟಿಯನ್ನು ಸೇರಿಸಿದ ಕಾರಣದಿಂದ ಕರಾವಳಿಯಲ್ಲಿ ಕೆಂಪುಕಲ್ಲು ಸಾಗಾಟಕ್ಕೆ ಸಮಸ್ಯೆ ಆರಂಭವಾಗಿತ್ತು. ರಾಯಲ್ಟಿ ಇಳಿಸಬೇಕು ಎನ್ನುವುದು ಕೆಂಪು ಕಲ್ಲು ತೆಗೆಯುವವರ ಪ್ರಮುಖ ಬೇಡಿಕೆಯಾಗಿದ್ದು, ಅದರಂತೆ ಕೆಂಪುಕಲ್ಲು ಹೊಸ ನಿಯಮಾವಳಿಗೆ ಸಂಬಂಧಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರು ಈಗಾಗಲೇ ಈ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ರಾಜಸ್ವ ಇಳಿಕೆ ಮಾಡುವುದು ಹಾಗೂ ಪರವಾನಗಿ ನೀಡುವ ವಿಧಾನವನ್ನು ಸರಳೀಕರಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರ್ಕಾರ ಬಡವರ ಪರ ಕಾಳಜಿ ವಹಿಸುತ್ತಿದ್ದು, ಸರಳೀಕೃತ ನಿಯಮದೊಂದಿಗೆ ಬಡವರ ಪರವಾಗಿ ನೀತಿ ರೂಪಿಸಿದೆ. ಈ ಹಿಂದೆ ಇದ್ದ 5 ಲೈಸೆನ್ಸ್ ಬದಲಿಗೆ ಈಗಾಗಲೇ 25 ಲೈಸೆನ್ಸ್‌ಗಳನ್ನು ನೀಡಲಾಗಿದೆ. ಶೀಘ್ರದಲ್ಲಿ ಸರಳೀಕೃತ ನಿಯಮದೊಂದಿಗೆ ಮರಳು ಮತ್ತು ಕೆಂಪು ಕಲ್ಲು ಅಭಾವಕ್ಕೆ ಮುಕ್ತಿ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಮುಖಂಡರಾದ ಪದ್ಮರಾಜ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು