6:13 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ

18/09/2025, 22:18

ಮಂಗಳೂರು(reporterkarnataka.com): ನಗರ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ – 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.

ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸಲು ಮುಂದಾಳುತ್ವ ವಹಿಸಲು ಆಸಕ್ತಿ ಇರುವ ಕ್ರೈಸ್ತ ಸಮುದಾಯದ ಮುಖಂಡರಿಗೆ, ಯುವ ಜನರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ತರಬೇತಿ, ಮಾಹಿತಿ ನೀಡುವುದು, ಸಮಾಲೋಚನೆ ನಡೆಸುವುದು ಮತ್ತು ಏಕತೆಯ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ.
ಬೆಳಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಪದವು, ವಾಮಂಜೂರು ವಾರ್ಡ್ ಗಳ ವ್ಯಾಪ್ತಿಗೆ ಬರುವ 5 ಚರ್ಚು ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ, ವಾಮಂಜೂರು) ಕ್ರೈಸ್ತ ಸಮುದಾಯದ ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕ್ಯಾಥೊಲಿಕ್ ಸಭಾ ಘಟಕಗಳ ಸದಸ್ಯರು, ಐ. ಸಿ. ವೈ. ಎಂ. ಸದಸ್ಯರು, ವಿವಿಧ ಮುಖಂಡರು ಹಾಗೂ ಆಸಕ್ತರು ಸೇರಿದಂತೆ ಸುಮಾರು 700 ಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಲರಾಯ್ ಚರ್ಚ್ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ ಕೋಸ್ಟಾ ಮತ್ತು ಕ್ಯಾಥೋಲಿಕ್ ಸಭಾ ಅಧ್ಯಕ್ಷ ಡೊಟ್ಟಿ ಬ್ರಾಗ್ಸ್ ಅವರು ತಿಳಿಸಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ಟಿನ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು