1:01 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು: ಕುಶಾಲನಗರ ಚೇಂಬರ್ ಆಫ್ ಕಾಮರ್ಸ್

19/09/2025, 22:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿಯನ್ನು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ ನೇತೃತ್ವದಲ್ಲಿ ನೀಡಲಾಯಿತು.
ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇಂಬರ್ ಪ್ರತಿನಿಧಿಗಳು, ಸ್ಥಳೀಯ ಪಂಚಾಯಿತಿ ಕಟ್ಟಡ ನಿರ್ಮಾಣ ಪರವಾನಗಿ ನೀಡುವಾಗ ಕಾರ್ಮಿಕ ಸೆಸ್ ಪಡೆದಿರುತ್ತಾರೆ. ಕಾರ್ಮಿಕ ಇಲಾಖೆ ಪಂಚಾಯಿತಿಯಿಂದ ಸಂಗ್ರಹಿಸಲಾದ ಸೆಸ್ ಹಣವನ್ನು ಪಡೆಯಬೇಕು. ಅದು ಬಿಟ್ಟು ಮಾಲೀಕರಿಗೆ ನೋಟಿಸ್ ನೀಡಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಇರಲು ಸೂಚಿಸಿದರು. ಪ್ರತಿ 45 ದಿನಗಳಿಗೆ ಒಮ್ಮೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಗಬೇಕಿರುವ ಕೆಲಸ ಕಾರ್ಯಗಳ ಚರ್ಚಿಸಿ ಮುನ್ನಡೆಯಲು ಸಲಹೆ ನೀಡಿದರು.
ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಅನವಶ್ಯಕವಾಗಿ ಯಾರಿಗೂ ನೋಟಿಸ್ ಕೊಡುವುದಕ್ಕಿಂತ, ಸರಿಯಾದ ರೀತಿಯಲ್ಲಿ ಪರಿಶೀಲಿಸಿ ಅಗತ್ಯವಿರುವವರಿಂದ ಟ್ಯಾಕ್ಸ್ ಸಂಗ್ರಹ ಮಾಡಿ. ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳನ್ನು ಪರಿಶೀಲಿಸಿ ಟ್ಯಾಕ್ಸ್ ಸಂಗ್ರಹ ಮಾಡಲು ಯಾರಿಂದಲೂ ವಿರೋಧವಿರುವುದಿಲ್ಲ ಎಂದು ತಿಳಿಸಿದರು.
ಸಚಿವರು ಶಾಸಕರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಸಭೆಯಲ್ಲಿ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಖಜಾಂಚಿ ಎನ್.ವಿ.ಬಾಬು, ಉಪಾಧ್ಯಕ್ಷ ರಂಗಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಅಂಬೇಕಲ್ ನವೀನ್, ಸೋಮವಾರಪೇಟೆ ಅಧ್ಯಕ್ಷ ಧನು ಕುಮಾರ್ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು