3:49 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು ಬ್ರಹ್ಮಕುಮಾರೀಸ್ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಭೇಟಿ

21/09/2025, 13:18

ಮಂಗಳೂರು(reporterkarnataka.com): ಬ್ರಹ್ಮಕುಮಾರೀಸ್ ಮಂಗಳೂರಿನ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಹಾಗೂ ಗಣ್ಯರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪೂಜ್ಯಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟ ದೇವರು, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಹಂದಿಗುಂದ, ಪೂಜ್ಯಶ್ರೀ ಬಸವಲಿಂಗ ಸ್ವಾಮಿಗಳು ಗವಿಮಠ ನವಲಗುಂದ, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಹೂಲಸೂರ, ಪೂಜ್ಯಶ್ರೀ ಮಹಾಂತಪ್ರಭು ಸ್ವಾಮಿಗಳು ಶೇಗುಣಸಿ, ಪೂಜ್ಯಶ್ರೀ ಬಸವ ದೇವರು ಬಸವಕಲ್ಯಾಣ, ಪೂಜ್ಯಶ್ರೀ ಬಸವಾನಂದ ಸ್ವಾಮಿಗಳು ಮಮ್ಮಿಗಟ್ಟಿ, ಪೂಜ್ಯಶ್ರೀ ವೀರಭದ್ರ ಸ್ವಾಮಿಗಳು ರಾಯಚೂರು ಸೇರಿದಂತೆ ಹಲವಾರು ಧಾರ್ಮಿಕ ಕ್ಷೇತ್ರದ ಮಹನೀಯರು ಆಗಮಿಸಿದರು.

ಅವರ ಗೌರವಾನ್ವಿತ ಸಾನ್ನಿಧ್ಯದಲ್ಲಿ ಬಿ.ಕೆ. ವಿಶ್ವೇಶ್ವರಿ ಅವರು ಆತ್ಮೀಯ ಸ್ವಾಗತ ಸಲ್ಲಿಸಿ, ಆತ್ಮಶಕ್ತಿ, ಧಾರ್ಮಿಕ ಸೌಹಾರ್ದ, ಶಾಂತಿಯ ಸಂದೇಶ ಹಾಗೂ ಪರಮಾತ್ಮನಿಂದ ಸಿಗುವ ದೈವೀ ಮಾರ್ಗದರ್ಶನದ ಕುರಿತು ಈಶ್ವರಿಯ ಸಂದೇಶವನ್ನು ಹಂಚಿಕೊಂಡರು.

ಬ್ರಹ್ಮಕುಮಾರಿ ಸಂಸ್ಥೆಯಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಸೇವಾಕಾರ್ಯ, ನೈತಿಕ ಮೌಲ್ಯಗಳ ಬೆಳವಣಿಗೆ ಮತ್ತು ಸಮಾಜದ ಶ್ರೇಯೋಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಕುರಿತು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಲವು ಬ್ರಹ್ಮಕುಮಾರಿಗಳು, ಬ್ರಹ್ಮಕುಮಾರಿಯರು ಹಾಗೂ ಸೇವಾಭಿಮಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು