3:46 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mangaluru | ಕೆಲರಾಯ್ ಚರ್ಚ್ ನಲ್ಲಿ ಲಾಯಿಕೋತ್ಸವ್ 2025

22/09/2025, 10:37

ಮಂಗಳೂರು(reporterkarnataka.com): ಮಂಗಳೂರು ತಾಲೂಕಿನ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್‌ ಘಟಕದ ವತಿಯಿಂದ ಲಾಯಿಕೋತ್ಸವ್ 2025 ರವಿವಾರ ಚರ್ಚ್ ನ ಗೋಲ್ಡನ್ ಜುಬಿಲಿ ಹಾಲ್‌ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಫಾದರ್ ಮುಲ್ಲರ್ ಚಾರಿಟೆಬಲ್‌ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ತಿನ್‌ ಲೂಕಸ್ ಲೋಬೊ ಅವರು ಉದ್ಘಾಟಿಸಿದರು, ಕೆಲರಾಯ್‌ ಚರ್ಚ್‌ನ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ಕೋಸ್ಟಾ ಅಧ್ಯಕ್ಷತೆ ವಹಿಸಿದ್ದರು.
ಕ್ಯಾಥೊಲಿಕ್‌ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷ ಸಂತೋಷ್ ಡಿ’ಸೋಜ, ಮಂಗಳೂರು ಧರ್ಮ ಪ್ರಾಂತ್ಯದ ಪಾಲನಾ ಪರಿಷತ್ತಿನ ಕಾರ್ಯದರ್ಶಿ ಜಾನ್ ಡಿ’ಸಿಲ್ವಾ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟೆಲಿನೊ, ಕ್ಯಾಥೊಲಿಕ್ ಸಭಾ ಸಿಟಿ ವಲಯದ ಅಧ್ಯಕ್ಷೆ ವಿಲ್ಮಾ ಮೊಂತೆರೊ, ಐಎಫ್‌ಕೆಸಿಎ ಕರ್ನಾಟಕ ಇದರ ಸಂಚಾಲಕ ಡೆನಿಸ್ ಡಿ’ಸಿಲ್ವಾ, ಕ್ಯಾಥೊಲಿಕ್ ಸಭಾ ಮಾಜಿ ಅಧ್ಯಕ್ಷ ರೋಲ್ಫಿ ಡಿ’ಕೋಸ್ತಾ, ಕ್ಯಾಥೊಲಿಕ್ ಸಭಾ ರಾಜಕೀಯ ವಿಭಾಗದ ಸಂಚಾಲಕ ಸ್ಟ್ಯಾನಿ ಲೋಬೊ, ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯಕ್ರಾಂತಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಐದು ಚರ್ಚ್ ಗಳ ಪಾಲನಾ ಸಮಿತಿಗಳ ಉಪಾಧ್ಯಕ್ಷರು, ಕ್ಯಾಥೋಲಿಕ್ ಸಭಾ ಅಧ್ಯಕ್ಷರು, ಧರ್ಮಗುರುಗಳು ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಕೆಲರಾಯ್, ಪಾಲ್ದನೆ, ನೀರ್‌ಮಾರ್ಗ, ವಾಮಂಜೂರು ಮತ್ತು ಫೆರ್ಮಾಯ್‌ ಚರ್ಚ್ ಗಳ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಐದು ಚರ್ಚ್ ಗಳ ವ್ಯಾಪ್ತಿಯ ಸರಕಾರಿ ನೌಕರರು, ಮಾಜಿ ಸೈನಿಕರು ಮತ್ತು ಚುನಾಯಿತ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಎಸಿಪಿ ವಿಜಯಕ್ರಾಂತಿ ಅವರು- ಸೈಬರ್ ಅಪರಾಧ ಮತ್ತು ಸಾಮಾಜಿಕ ಮಾಧ್ಯಮಗಳ ಕುರಿತು, ಮಾಜಿ ಸಿವಿಲ್ ನ್ಯಾಯಾಧೀಶರಾದ ವಿಜೇತಾ ಪಿಂಕಿ ಡೆ’ಸಾ ಅವರು ಆಸ್ತಿ ವಿಷಯಗಳು ಮತ್ತು ಕಾನೂನು ದಾಖಲಾತಿ ಕುರಿತು, ಗಾಡ್ವಿನ್ ಪಿಂಟೊ ಅವರು ಕೃಷಿ ಮತ್ತು ಸಣ್ಣ ಕೈಗಾರಿಕೆಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ, ವಕೀಲ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತ ಸುಧೀರ್ ಕುಮಾರ್ ಅವರು ಸಾಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳು, ಪತ್ರಕರ್ತ ವಿಲ್ಫ್ರೆಡ್ ಡಿ’ಸೋಜ ಅವರು ಪಂಚಾಯತ್ ಸಭೆಗಳಲ್ಲಿ ಭಾಗವಹಿಸುವಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು