3:45 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ‘ಕರುಣೆಯ ತೊಟ್ಟಿಲು’

22/09/2025, 14:29

ಮಂಗಳೂರು(reporterkarnataka.com): ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಎಂ ಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್‌ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು ಟ್ರಸ್ಟಿಗಳ ಸಹಾಯದಿಂದ ನಡೆಯುವ ‘ಕಾರುಣ್ಯ ಯೋಜನೆ’ಯನ್ನು ನ.1ರಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಲಾಗುತ್ತಿದೆ ಎಂದರು.
ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಕಲ್ಪನೆಯಾಗಿ ಕ್ಲೋತ್ ಬ್ಯಾಂಕ್ ಆರಂಭಿಸಲಾಗಿದೆ. ಸಾರ್ವಜನಿಕರು ಹೊಸದಾಗಿ ಖರೀದಿಸಿದ ಅಥವಾ ಬಳಕೆ ಮಾಡಿದ ಶುಭ್ರ ಬಟ್ಟೆಗಳನ್ನು ಇಲ್ಲಿ ತಂದು ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜತೆಗಾರರು ಕೊಂಡೊಯ್ಯಲಿದ್ದಾರೆ ಎಂದು ಅವರು ಹೇಳಿದರು.
ಎಂ ಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯ ಡಿಎಂಒ ಅವರ ಮನವಿ ಮೇರೆಗೆ ಕ್ಲೋತ್ ಬ್ಯಾಂಕ್ ಆರಂಭಿಸಿದ್ದು, ಅದರ ಖರ್ಚು ವೆಚ್ಚವನ್ನು ನಮ್ಮ ಟ್ರಸ್ಟಿ ಶರೀಫ್ ವೈಟ್‌ಸ್ಟೋನ್ ಭರಿಸಿದ್ದಾರೆ. ಜನರು ಉತ್ತಮ ದರ್ಜೆಯ ಬಟ್ಟೆ ತಂದು ಕೊಟ್ಟು ಸಹಕರಿಸಬೇಕು. ಇಲ್ಲಿಯ ಸಿಬ್ಬಂದಿ ಅಗತ್ಯವಿರುವವರಿಗೆ ವಿತರಿಸಲಿಸಲಿದ್ದಾರೆ ಎಂದು ಅವರು ನುಡಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್‌ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಆರ್‌ಎಂಒ ಡಾ.ಸುಧಾಕರ್, ಕೆಎಂಸಿ ಆಸ್ಪತ್ರೆ ಡೀನ್ ಡಾ.ಉನ್ನಿಕೃಷ್ಣನ್, ಜಿಪಂ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ., ಮಾಜಿ ಕಾರ್ಪೊರೇಟರ್ ಎ.ಸಿ.ವಿನಯರಾಜ್, ಎಂ ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಟ್ರಸ್ಟಿಗಳಾದ ಮೊಹಮ್ಮದ್ ಹನೀಫ್ ಗೋಳ್ತಮಜಲು, ಅಬೂಬಕರ್ ಕೆ., ಅಬೂಬಕರ್ ಪುತ್ತು, ಅನ್ವರ್ ಹುಸೇನ್, ಇಬ್ರಾಹಿಂ ಮೊಯ್ದಿನಬ್ಬ ನಂದಾವರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಸಲೀಂ ಮಕ್ಕಾ, ಡಿ.ಎಂ.ರಶೀದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು