1:12 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

Mangaluru | ರಚನಾ ಪ್ರಶಸ್ತಿ ಪುರಸ್ಕೃತ ಶೋಭಾ ಮೆಂಡೋನ್ಸಾಗೆ ವಾಮಂಜೂರು ಚರ್ಚ್ ನಿಂದ ಅಭಿನಂದನೆ

08/10/2025, 14:14

ಮಂಗಳೂರು(reporterkarnataka.com): ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಚನಾ ಅತ್ಯುತ್ತಮ ಮಹಿಳೆ 2025 ( Rachana Outstanding Woman Award 2025) ಪ್ರಶಸ್ತಿ ಪುರಸ್ಕೃತೆ ಶೋಭಾ ಮೆಂಡೋನ್ಸಾ ಅವರನ್ನು ವಾಮಂಜೂರು ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೇಮ್ಸ್ ಡಿ ಸೋಜಾ ಅವರು ಭಕ್ತಾದಿಗಳ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಚರ್ಚ್ ಉಪಾಧ್ಯಕ್ಷ ಚಾರ್ಲ್ಸ್ ಪಾಯ್ಸ್ ಮಾತನಾಡಿ ಶೋಭಾ ಮೆಂಡೋನ್ಸಾ ಅವರು ವಾಮಂಜೂರು ಚರ್ಚ್ ಸಮುದಾಯಕ್ಕೆ ನೀಡಿರುವ ದೇಣಿಗೆಯನ್ನು ಹಾಗೂ ವಿದೇಶದಲ್ಲಿ ಅವರು ನಡೆಸುವ ಉದ್ಯಮದ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ವಿಶೇಷವಾಗಿ 2007ರಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇರಿ ‘ಮೆಂಡೋನ್ಸಾ ಎಜ್ಯುಕೇಶನಲ್ ಫಂಡ್’ ಸ್ಥಾಪಿಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಸಹಾಯ ಧನ ನೀಡಿರುವುದಕ್ಕಾಗಿ ಹಾಗೂ ಇಲ್ಲಿ ಹಮ್ಮಿಕೊಂಡಿರುವ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಅವರು ಮತ್ತು ಮೆಂಡೋನ್ಸಾ ಕುಟುಂಬದ ಸದಸ್ಯರು ನೀಡಿರುವ ದೇಣಿಗೆಗಳಿಗಾಗಿ ಅವರ ಉಪಕಾರ ಸ್ಮರಿಸಿದರು.
ಕಾಕತಾಳೀಯ ಎಂಬಂತೆ 2009 ರಲ್ಲಿ ಅವರ ಪತಿ ಜೇಮ್ಸ್ ಮೆಂಡೋನ್ಸಾ ಅವರಿಗೆ ರಚನಾ- ಅತ್ಯುತ್ತಮ ಅನಿವಾಸಿ ಭಾರತೀಯ ಪ್ರಶಸ್ತಿ – 2009 ನೀಡಿ ಗೌರವಿಸಲಾಗಿದ್ದ ಸಂದರ್ಭವನ್ನು ನೆನಪಿಸಿ ಅವರಿಗೂ ಅಭಿನಂದನೆ ಸಲ್ಲಿಸಿ ಚರ್ಚ್ ಪ್ರಧಾನ ಧರ್ಮಗುರುಗಳು ಹೂ ಗುಚ್ಛ ನೀಡಿ ಗೌರವಿಸಿದರು. ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೀವನ್ ಶೈಲೇಶ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಸಿ. ಎ. ಲೋವೆಲ್ ಮೊಂತೇರೊ, 21 ಆಯೋಗಗಳ ಸಂಯೋಜಕ ಅನಿಲ್ ಪಿಂಟೊ, ಧರ್ಮ ಭಗಿನಿಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು