4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಅಕ್ಟೋಬರ್ 12ರಂದು ವಾರ್ಷಿಕ ಹಬ್ಬ: 12 ಚರ್ಚ್ ಧರ್ಮಗುರುಗಳಿಂದ ಬಲಿಪೂಜೆ

09/10/2025, 18:58

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ವಾರ್ಷಿಕ ಹಬ್ಬ (ಸಾಂತ್ ಮಾರಿ) ವನ್ನು ಅಕ್ಟೋಬರ್ 12ರಂದು ವಿಜೃಂಭಣೆಯಿಂದ ಆಚರಿಸಲಾಗುವುದು.
ಅಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿ’ ಸೋಜಾ ಅವರು ಬಲಿ ಪೂಜೆಯ ನೇತೃತ್ವ ವಹಿಸಿ ಸಮಸ್ತ ಭಕ್ತರನ್ನು ಆಶೀರ್ವದಿಸುವರು. ಪಾಲ್ದನೆ ಚರ್ಚ್ ಧರ್ಮ ಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯ 12 ಚರ್ಚ್ ಗಳ ಧರ್ಮ ಗುರುಗಳು ಬಲಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ದಿನ ಐ ಸಿ ವೈ ಎಂ ಸದಸ್ಯರು ‘ನಶೀಬಚೊ ಖೆಳ್‌’ ಎಂಬ ಮನೋರಂಜನಾ ಕಾರ್ಯಕ್ರಮ ಮತ್ತು ಗೇಮ್ಸ್ ಗಳನ್ನು ನಡೆಸುವರು. ಅಲ್ಲದೆ ಸ್ಟಾಲ್ ಗಳ ವ್ಯವಸ್ಥೆಯನ್ನು ಮಾಡಲಿದ್ದಾರೆ. ಸಂಜೆ ‘ತಾಲೆಂತಾಚೊ ಸಂಭ್ರಮ್’ ಎಂಬ ಕಾರ್ಯಕ್ರಮವಿದ್ದು, ಅದರಲ್ಲಿ ಚರ್ಚಿನ ಸದಸ್ಯರಿಗೆ ವಿವಿಧ ಸ್ಪರ್ಧೆಗಳು, ಫುಡ್ ಫೆಸ್ಟಿವಲ್, ಪ್ರಸಿದ್ಧ ಗಾಯಕರಿಂದ ಸಂಗೀತ ಕಾರ್ಯಕ್ರಮ ಇರಲಿದೆ ಎಂದು ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು