4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Raichuru | ಮಸ್ಕಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3.24 ಲಕ್ಷ ರೂ. ದಂಡ

09/10/2025, 19:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಜಮೀನಿಗೆ ಹೋಗಲು ದಾರಿ ಕೊಡದೆ ಇರುವುದರ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನಗರದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿದೆ.
ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬರುವ ರಂಗಾಪುರ ಸರ್ವೇ ನಂಬರ್ 07ರಲ್ಲಿ
ಮೃತ ಶಿವರುದ್ರಪ್ಪ ಅವರ ಜಮೀನಿಗೆ ಹೋಗಲು ಆರೋಪಿತರು ದಾರಿ ರಸ್ತೆ ಕೊಡದೆ ಇದ್ದಿದ್ದರಿಂದ ಮೃತ ಶಿವರುದ್ರಪ್ಪನನ್ನು ತಮ್ಮ ಹೊಲದಿಂದ ಆರೋಪಿತರ ಹೊಲಕ್ಕೆ ಹೋಗುತ್ತಿದ್ದ ಕಾಲುವೆ ನೀರನ್ನು ಬಂದು ಮಾಡಿರುವುದರಿಂದ ಅದೇ ದ್ವೇಷದ ಹಿನ್ನೆಲೆಯಲ್ಲಿ..
ಆರೋಪಿತರು ಕೊಡಲೇ ಬಡಿಗೆಗಳನ್ನು ಹಿಡಿದು ಜಮೀನಿನಲ್ಲಿ ಅತಿಕ್ರಮಣವಾಗಿ ಪ್ರವೇಶ ಮಾಡಿ ಜಗಳ ತೆಗೆದು ಕೊಡಲಿ ಕಾವಿನಿಂದ ಮತ್ತು ಬಡಿಗೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ದೂರದ ವಿರುದ್ಧ ಬೆಳಗನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಸಿಂಧನೂರ್ ಅವರ ಪ್ರಕರಣ ವಾದಗಳನ್ನು ಆಲಿಸಿದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರು ಅಪರಾಧ ಎಸಿಗಿದ್ದಾರೆಂದು ಪರಿಗಣಿಸಿ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರ್ವ ಮಂಗಳ ಆರ್. ಗಡಕರಿ ವಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು