4:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Sports | ಕಾಟಿಪಳ್ಳ ಇನ್ಫೆಂಟ್ ಮೇರಿ ಶಾಲಾ ತಂಡಗಳು ವಿಭಾಗಮಟ್ಟಕ್ಕೆ ಆಯ್ಕೆ

11/10/2025, 20:36

ಮಂಗಳೂರು(reporterkarnataka.com): ಮಂಗಳೂರು ಉತ್ತರ ವಲಯದಲ್ಲಿ ಪ್ರಥಮ ಸ್ಥಾನಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳಲ್ಲಿ ಭಾಗವಹಿಸಿದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಾಟಿಪಳ್ಳ ನೇತೃತ್ವದ ೧೪ ವರ್ಷ ವಯೋಮಿತಿಯೊಳಗಿನ ಹಾಗೂ ೧೭ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ನಾಲ್ಕೂ ವಿಭಾಗಗಳ ತಂಡಗಳು ಜಯಶಾಲಿಯಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಫಾ| ಸಂತೋಷ್ ಲೋಬೋ ತಿಳಿಸಿದ್ದಾರೆ.


ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಡಿಕೂನ್ಹಾರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ವಿನ್ಯಾಸ್ ರವರು ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದ ಖೊಖೊ ಪಂದ್ಯಾಟಗಳು ಪುತ್ತೂರು ತಾಲೂಕಿನ ಶ್ರೀಗೋಪಾಲಕೃಷ್ಣ ಅನುದಾನಿತ ಪ್ರೌಢಶಾಲೆ, ಬಿಳಿನೆಲೆಯಲ್ಲಿ ಅಕ್ಟೋಬರ್ ೯ರಂದು ನಡೆದು ಈ ಪಂದ್ಯಾಟಗಳಲ್ಲಿ ಬೆಸ್ಟ್ ಆಲ್ ರೌಂಡರ್ ಆಗಿ ಶೈಲಿ, ಮಯೂರ್, ಕನ್ನಿಕಾ ಶೆಟ್ಟಿ ಮತ್ತು÷ಹಸನ್ ಸಾದ್ ಆಯ್ಕೆಯಾದರು. ಬೆಸ್ಟ್ ರನ್ನರ್ ಆಗಿ ಜಯಲಕ್ಷ್ಮಿ ಮತ್ತು ಜಾಹ್ನವಿ, ಬೆಸ್ಟ್ ಚೇಜರ್ ಆಗಿ ವರ್ಷಿತ್ ಜೆ ಶೆಟ್ಟಿ ಪುರಸ್ಕೃತರಾದರು. ಅಲ್ಲದೆ ಬಜ್ಪೆಯ ಸೈಂಟ್ ಜೋಸೆಫ್ ಪ್ರೌಢಶಾಲೆಯ ಅಫ್ರಾಜ್ ವೈಯುಕ್ತಿಕ ಪ್ರಶಸ್ತಿ ಪಡೆದರು. ಮೈಸೂರು ವಿಭಾಗ ಮಟ್ಟದ ಖೊಖೊ ಪಂದ್ಯಾಟಗಳು ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೧೨ ಮತ್ತು ೧೩ ರಂದು ನಡೆಯಲಿದ್ದು ಈ ತಂಡಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು