11:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

53ನೇ ಬಜಾಲ್ ವಾರ್ಡ್: 1 ಕೋಟಿ ವೆಚ್ಚದ 15ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿಪೂಜೆ

19/10/2025, 21:01

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ಅತೀ ಅಗತ್ಯವಿರುವ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ನಿರ್ಮಾಣ, ಕಾಲುದಾರಿ, ಆರ್.ಸಿ.ಸಿ ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುದಾನವನ್ನು ಹೊಂದಿಸಿಕೊಂಡು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೆ ತಡೆ ನೀಡಿತ್ತು. ಈ ಬಗ್ಗೆ ನಿರಂತರವಾಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಇಲ್ಲಿ ನಡೆಯಬೇಕಿರುವ ತುರ್ತು ಕಾಮಗಾರಿಯ ಬಗ್ಗೆ ಮನವರಿಕೆ ಮಾಡಿದ ಪರಿಣಾಮ ಇದೀಗ ಮತ್ತೆ ಹಿಂದಿನ ಬಿಜೆಪಿ ಸರ್ಕಾರದ ಕಾಮಗಾರಿಗೆ ಚಾಲನೆ ದೊರೆತಿದೆ ಎಂದರು.

ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿಗೆ ಯಾವುದೇ ಅನುದಾನ ದೊರೆಯುತ್ತಿಲ್ಲವಾಗಿದ್ದು, ಕ್ಷೇತ್ರದ ಇತರೆಡೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅದಾಗ್ಯೂ ಈ ಬಗ್ಗೆ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ, ರಾಮ್ ಪ್ರಸಾದ್, ವರುಣ್ ಅಂಬಟ್, ಭಾಸ್ಕರ ಚಂದ್ರ ಶೆಟ್ಟಿ, ಗಣೇಶ್, ಚಂದ್ರಶೇಖರ್, ಶಿವಾಜಿ ರಾವ್, ಹರಿ ಕೇಶವ, ಸುರೇಶ್ ರಾವ್, ವಿಜಯ, ಅಮರ್ ಶೆಟ್ಟಿ, ಚಂದ್ರ, ಅಜಿತ್ ಪಾಟೀಲ್, ಯೋಗೀಶ್, ಜಗದೀಶ್, ರೋಹಿಣಿ, ಲೋಲಾಕ್ಷಿ, ಕವಿತಾ, ಲಕ್ಷ್ಮಿ ನಾರಾಯಣ, ಯಾದವ ಗಾಣದಬೆಟ್ಟು, ಗಂಗಾಧರ್, ಸೀತಾರಾಮ್, ಕಮಲಾಕ್ಷ, ಶೋಭಾ ಪಲ್ಲಕೆರೆ, ಯಮುನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು