11:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ

02/11/2025, 20:05

ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ಚರ್ಚ್ ಗಳಿಗೆ ಕುಲಶೇಖರ ಚರ್ಚ್ ಸಿಮೆಟರಿಯೇ ಅಧಿಕೃತ ಸಿಮೆಟರಿ ಆಗಿದ್ದು,ಇಂದು ಈ ಮೂರು ಚರ್ಚ್ ಗಳ ಕ್ರೈಸ್ತರು ಕುಲಶೇಖರ ಚರ್ಚ್ ಗೆ ತೆರಳಿ ಅಲ್ಲಿನ ಸಿಮೆಟರಿಯಲ್ಲಿ ವಿಶೇಷ ಪ್ರಾರ್ಥನೆ ನಡೆಸಿದರು.

ಕುಲಶೇಖರ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಕ್ಲಿಫರ್ಡ್ ಫೆರ್ನಾಂಡಿಸ್ ಮತ್ತು ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಪವಿತ್ರ ಜಲ ಸಿಂಪರಣೆ ಮಾಡಿ ಸಮಾಧಿಗಳನ್ನು ಆಶೀರ್ವದಿಸಿದರು. ಸಮಾಧಿ ಸ್ಥಳವನ್ನು ಸ್ವಚ್ಛಗೊಳಿಸಿ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆಗೆ ಅಣಿಗೊಳಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಕುಲಶೇಖರ ಚರ್ಚ್ ನ ಸಿಮೆಟರಿಯಲ್ಲಿ ನೂತನವಾಗಿ ಸ್ಥಾಪಿಸಿದ ಪವಿತ್ರ ಶಿಲುಬೆಯ ಆಶೀರ್ವಾದ ಕೂಡಾ ನೆರವೇರಿತು. ಮೂರೂ ಚರ್ಚ್ ಗಳ ಕ್ರೈಸ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು