1:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಈಜು ಸ್ಪರ್ಧೆ: ಪುತ್ತೂರಿನ ಅಂಬಿಕಾ ಪಿಯು ಕಾಲೇಜಿನ ಪ್ರತೀಕ್ಷಾ ಶೆಣೈ ರಾಷ್ಟ್ರಮಟ್ಟಕ್ಕೆ ಆಯ್ಕೆ

03/11/2025, 20:28

ಪುತ್ತೂರು(reporterkarnataka.com): ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ಈ ಸ್ಪರ್ಧೆಯ ೫೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ ೨೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ, ೧೦೦ ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು ೧೦೦ ರಿಲೇಯಲ್ಲಿ ಕಂಚಿನ ಪದಕ ಪಡೆದು ಪ್ರತೀಕ್ಷಾ ಶೆಣೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ಎಂ. ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಶೆಣೈ ದಂಪತಿ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು