1:33 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಅರೆಸ್ಟ್ ವಾರೆಂಟ್ ನೀಡಲು ತೆರಳಿದ ಪೊಲೀಸರು: ಖಾಕಿ ಎದುರೇ ಬೆಂಕಿ ಹಚ್ಚಿಕೊಂಡ ಕಳ್ಳ; ಗಂಭೀರ ಗಾಯ

05/11/2025, 14:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಲವು ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕಳ್ಳನೊಬ್ಬನಿಗೆ ಕೋರ್ಟ್ ವಾರೆಂಟ್ ನೀಡಿ ಬಂಧಿಸಲು ತೆರಳಿದ ವೇಳೆ ಆತ ಬೆಂಕಿ ಹಚ್ಚಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಸೋಮವಾರ ಪೇಟೆ ಪಟ್ಟಣದ ಗಾಂಧಿ ನಗರದಲ್ಲಿ ನಡೆದಿದೆ.

ಪೊಲೀಸರು ಮನೆಯ ಮುಂದೆ ಪೊಲೀಸರು ಬರುತ್ತಿದ್ದಂತೆ ಬಟ್ಟೆ ಬದಲಾಯಿಸಿ ಬರುವುದಾಗಿ ಹೇಳಿ ಒಳಗೆ ಹೋದ ಕಳ್ಳ ಸಂಜಯ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಏಚೆತ್ತುಕೊಂಡ ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ್ ಮತ್ತು ಸಾಜನ್ ರಕ್ಷಿಸಲು ಮನೆಯೊಳಗೆ ನುಗ್ಗಿದ್ದು, ಪೊಲೀಸರಿಗೂ ಸುಟ್ಟ ಗಾಯಗಳೊಂದಿಗೆ ಕಳ್ಳ ಸಂಜಯ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ಮೈ ಗಂಭೀರವಾಗಿ ಸುಟ್ಟು ಹೋಗಿದ್ದು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು