7:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ

01/09/2021, 08:46

ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್  ಉಚಿತ ನೋಂದಾವಣೆ ಕಾರ್ಯಕ್ರಮ ರಾಮಪ್ಪ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲಾಜಿ ಶಿಬಿರದ ಗುರುಗಳಾದ ಬಾಲಕೃಷ್ಣ ಹೆಗ್ಡೆ ಭಾರತಂಬೆಗೆ ಹೂವು ಹಾಕಿ, ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು. ಇ-ಶ್ರಮ ಯೋಜನೆಯ ರೂಪುರೇಷೆಗಳನ್ನು ಗಣೇಶ ದಿಶಾನಿ ಅವರು ವಿವರಿಸಿದರು. ಕಾರ್ಯಕ್ರಮದ ನಿರೂಪಣೆ ಯೂಥ್ ಫಾರ್ ಸೇವಾ ತಂಡದ ರಮಿತಾ ಶೈಲೆಂದ್ರ ರಾವ್ ಮಾಡಿದರು. ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್ ಬಂಧಿಸಿದರು.

ವೇದಿಕೆಯಲ್ಲಿ ಕಾರ್ಕಳ ಪುರಸಭೆ ಸದಸ್ಯರಾದ ಮೀನಾಕ್ಷಿ, ಸೇವಾ ಸಿಂಧೂ ಅನಿಲ್ ಕಾಮತ್ ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ

ಮೋಹನ್ ಶೆಣೈ ಅವರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಯೂತ್ ಫಾರ್ ಸೇವಾ ತಂಡದ ಸದಸ್ಯರು, ಯುವ ವಾಹಿನಿ ತಂಡದ ಸದಸ್ಯರು ಹಾಗೂ ಕಾರ್ಕಳ ಕಾರ್ಕಳದ ಸುಮಾರು 780 ಕ್ಕೂ ಮಿಕ್ಕಿದ ಫಲಾನುಭವಿ ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು