6:56 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ಅನಂತರಾಜ ಗೌಡ,ಲೋಕೇಶ್ವರಿ ವಿನಯಚಂದ್ರ, ಲಲಿತ ಅಯ್ಯಣ್ಣಗೆ ಪ್ರಶಸ್ತಿ

04/03/2026, 12:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಅನಂತರಾಜ ಗೌಡ (ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರ), ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಲೋಕೇಶ್ವರಿ ವಿನಯಚಂದ್ರ (ಅರೆಭಾಷಿಕ ಸಂಘಟನಾ ಕ್ಷೇತ್ರ) ಮತ್ತು ಕೊಡಗು ಜಿಲ್ಲೆ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ (ಅರೆಭಾಷೆ ಸಾಹಿತ್ಯ ಕ್ಷೇತ್ರ) ಇವರುಗಳನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರಿನಲ್ಲಿ ಮಾರ್ಚ್ 14ರಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಕಾಡೆಮಿ ಅದ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು