6:08 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಅರ್ಜಿ ವಿಲೇವಾರಿಗೆ ಸತಾಯಿಸಿದ ಸರ್ವೆ ಅಧಿಕಾರಿಗಳು: ಅರ್ಜಿದಾರನಿಂದ ಏಕಾಂಗಿ ಪ್ರತಿಭಟನೆ!

19/11/2022, 18:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಕಚೇರಿಯಲ್ಲಿರುವ ಸರ್ವೆ ಇಲಾಖೆ ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡದೇ ಸತಾಯಿಸುತ್ತಿದ್ದ ಹಿನ್ನಲೆಯಲ್ಲಿ ಅರ್ಜಿದಾರ ಶ್ರೇಷ್ಠಿ ಎಂಬುವರು ಶನಿವಾರ ಸರ್ವೇ ಇಲಾಖೆ ಮುಂದೆ ನಾಳೆ ಬಾ ಎಂಬ ನಾಮಫಲಕವನ್ನು ತನ್ನ ಶರ್ಟ್ನ ಹಿಂದೆ ಮುಂದೆ ಹಾಕಿಕೊಂಡು ವಿಭಿನ್ನ ರೀತಿಯಲ್ಲಿ ಏಕಾಂಗಿಯಾಗಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ತಿ ವಿಭಾಗ ಪತ್ರಕ್ಕಾಗಿ ತಾನು ಸರ್ವೆ ಅಧಿಕಾರಿಗಳಿಗೆ ೧೬-೦೯-೨೦೨೨ರಂದು ಅರ್ಜಿ ಸಲ್ಲಿಸಿದ್ದೆ. ಲೆವೆನ್-ಇ ಸ್ಕೆಚ್ ಮಾಡಲು ೫ ನಿಮಿಷ ಸಾಕು. ಕ್ಯೋ ಕೋಡ್ ಸಂಖ್ಯೆ ಬರಲು ಒಂದು ದಿನ ಸಾಕು. ಈ ಕೆಲಸ ಮಾಡಿಕೊಡಲು ಕಳೆದ ೬೫ ದಿನದಿಂದ ಸತಾಯಿಸುತ್ತಿದ್ದಾರೆ. ಪ್ರತಿದಿನ ತಾಲೂಕು ಕಚೇರಿಗೆ ಅಲೆಯುವುದೇ ಕೆಲಸವಾಗಿಬಿಟ್ಟಿದೆ. ಅಲ್ಲದೇ ಈ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿ ಕಮಿಷನರ್ ಅವರನ್ನೂ ಕೂಡ ಭೇಟಿ ಮಾಡಿ ಬಂದಿದ್ದೇನೆ.

ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ತನ್ನ ಅರ್ಜಿ ವಿಲೆ ಬಗ್ಗೆ ಕಚೇರಿಗೆ ಬಂದಾಗ ಅಧಿಕಾರಿಗಳು ಸರಿಯಾದ ಮಾಹಿತಿ ಕೂಡ ನೀಡುತ್ತಿರಲಿಲ್ಲ. ಹಾಗಾಗಿ ದಿಕ್ಕು ತೋಚದೇ ಪ್ರತಿಭಟಿಸುವಂತಾಗಿದೆ. ಈಗ ಇಲ್ಲಿನ ಸರ್ವೇ ಅಧಿಕಾರಿಗಳು ತನ್ನ ಅರ್ಜಿ ಕೈಗೆತ್ತುಕೊಂಡು ಸೋಮವಾರ ವಿಲೇ ಮಾಡುವ ಭರವಸೆ ನೀಡಿದ್ದಾರೆ. ಸೋಮವಾರ ಕೂಡ ತನ್ನ ಕೆಲಸ ಆಗದಿದ್ದರೆ ಮತ್ತೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು