4:33 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಆರೋಗ್ಯ ಸಚಿವರ ಎದೆ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು; ಎಎಸ್ ಐ ದುಷ್ಕೃತ್ಯ

29/01/2023, 16:43

ಹೊಸದಿಲ್ಲಿ(reporterkarnataka.com): ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್‌ ದಾಸ್‌ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಲಾಗಿದೆ.
ಝಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್‌ ಸಮೀಪ ಈ ದಾಳಿ ನಡೆದಿದೆ.

ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡವ ಕಿಶೋರ್ ದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ
ಸಚಿವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಗುಂಡೇಟು ಎದೆಗೆ ತಗುಲಿದ್ದು, ಸಚಿವರು ತೀವ್ರ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸಚಿವರ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡ ಸಚಿವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಅವರನ್ನು ವಿಮಾನದಲ್ಲಿ ಭುವನೇಶ್ವರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರು ಸಚಿವರ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಸ್ಥಳೀಯರು ಬಂಧಿಸಿದ್ದು, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ದಾಳಿಯ ಹಿಂದಿನ ಉದ್ದೇಶಗಳು ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು