2:31 PM Thursday19 - June 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ

ಇತ್ತೀಚಿನ ಸುದ್ದಿ

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ

03/02/2025, 09:30

ಮೈಸೂರು(reporterkarnataka.com): ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ, ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
*ಜನರ ಆರೋಗ್ಯದ ಜಾಗೃತಿ ಮೂಡಿಸಬೇಕು:*
ಸಮುದಾಯ ಆರೋಗ್ಯದ ಸುಧಾರಣೆ ಸರ್ಕಾರ, ಇಲಾಖೆ ಹಾಗೂ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ. ಜನರ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸುವ ಸಮುದಾಯ ಆರೋಗ್ಯ ಅಧಿಕಾರಿಗಳ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತದೆ. ರೋಗವನ್ನು ಪತ್ತೆಮಾಡುವ ಜೊತೆಗೆ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಸಮುದಾಯ ಆರೋಗ್ಯಾಧಿಕಾರಿಗಳು ಮಾಡಬೇಕು. ಖಾಸಗಿ ಆಸ್ಪತ್ರೆಗಳಿಗೆ ಹೋಗಿ ದುಬಾರಿ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದ ಬಡವರು ಸರ್ಕಾರಿ ಆಸ್ಪತ್ರೆಗಳ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ರೋಗದ ಚಿಕಿತ್ಸೆಗಿಂತಲೂ, ಅದರ ತಡೆಗಟ್ಟುವಿಕೆ ಉತ್ತಮ. ರೋಗ ಬರದಂತೆ ಜಾಗೃತಿ ವಹಿಸುವುದು ಮುಖ್ಯ. ಇದಕ್ಕೆ ಪೂರಕವಾಗಿ ಉತ್ತಮ ಪೌಷ್ಠಿಕ ಆಹಾರ ಮತ್ತು ಜೀವನಶೈಲಿಯನ್ನು ನಡೆಸಬೇಕು. ಆಹಾರಭದ್ರತೆ ಸಾಧಿಸಲು ಹೆಚ್ಚು ಬೆಳೆ ಬೆಳೆಯುವ ಉದ್ದೇಶದಿಂದ ಕೃಷಿಯಲ್ಲಿ ಹೆಚ್ಚು ರಾಸಾಯನಿಕಗಳನ್ನು ಬಳಸಾಗುತ್ತಿದ್ದು, ಹೊಸ ರೋಗಗಳು ಹುಟ್ಟಿಕೊಳ್ಳುತ್ತಿವೆ. ಈ ಸವಾಲನ್ನು ಆರೋಗ್ಯಾಧಿಕಾರಿಗಳು ಸಮರ್ಥವಾಗಿ ಎದುರಿಸಿ ಸಮುದಾಯದ ಆರೋಗ್ಯವನ್ನು ಕಾಪಾಡಬಹುದಾಗಿದೆ ಎಂದರು.

*ಬೇಡಿಕೆಗಳ ಪರಿಶೀಲಿಸಿ ತೀರ್ಮಾನ:* ಆರೋಗ್ಯಾಧಿಕಾರಿಗಳು ಇಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ ತೀರ್ಮಾನಿಸಲಾಗುವುದು. ಜನರ ಆರೋಗ್ಯ ರಕ್ಷಣೆಯ ಗುರುತರ ಜವಾಬ್ದಾರಿಯನ್ನು ನಿಭಾಯಿಸುವ ಸಮುದಾಯ ಆರೋಗ್ಯಾಧಿಕಾರಿಗಳ ಜೊತೆ ಸರ್ಕಾರ ಇರಲಿದೆ. ಸಮುದಾಯ ಆರೋಗ್ಯಾಧಿಕಾರಿಗಳಿಗೆ ಬೋನಸ್ ಹಾಗೂ ವೇತನ ಹೆಚ್ಚಳ ಹಾಗೂ ಅಂತರಜಿಲ್ಲಾ ವರ್ಗಾವಣೆ, ಆರೋಗ್ಯ ವಿಮೆ ಯೋಜನೆ ಜಾರಿ ಮಾಡುವ ಭರವಸೆಯನ್ನು ನೀಡಿದ ಮುಖ್ಯಮಂತ್ರಿಗಳು, ಗುತ್ತಿಗೆ ನೌಕರರನ್ನು ಖಾಯಂ ಗೊಳಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು