11:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿಗೆ ಸಂಚು ಆರೋಪದ ಮೇಲೆ ಬಂಧಿತ ಜೈಲಿನಲ್ಲೇ ಹತ್ಯೆ: ಸಹ ಕೈದಿಯಿಂದ ಕೊಲೆ

10/02/2026, 18:27

ಲಕ್ನೋ(reporterkarnataka com): ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಅಬ್ದುಲ್ ರೆಹಮಾನ್ ಎಂಬಾತನನ್ನು ಹರಿಯಾಣದ ಫರಿದಾಬಾದ್ ಜೈಲಿನಲ್ಲಿ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ.

*ಯಾರೀ ಅಬ್ದುಲ್ ರೆಹಮಾನ್?:* ಉತ್ತರ ಪ್ರದೇಶದ ಮಿಲ್ಕಿಪುರ ನಿವಾಸಿಯಾದ ಅಬ್ದುಲ್ ರೆಹಮಾನ್ (20), 2025ರ ಮಾರ್ಚ್‌ನಲ್ಲಿ ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ಬಂಧಿತನಾಗಿದ್ದ. ರಾಮಮಂದಿರದ ಮೇಲೆ ಸ್ಫೋಟ ನಡೆಸಲು ಈತ ಸಂಚು ರೂಪಿಸಿದ್ದ ಮತ್ತು ಪಾಕಿಸ್ತಾನದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದ ಎಂದು ತನಿಖಾ ಸಂಸ್ಥೆಗಳು ಶಂಕಿಸಿದ್ದವು.

*ಹತ್ಯೆ ನಡೆದದ್ದು ಹೇಗೆ ?:* ಜೈಲಿನಲ್ಲಿದ್ದ ಕಾಶ್ಮೀರಿ ಮೂಲದ ಕೈದಿ ಅರುಣ್ ಚೌಧರಿ ಎಂಬಾತನ ಜೊತೆ ರೆಹಮಾನ್ ಭಾನುವಾರ ಜಗಳವಾಡಿದ್ದ. ಜಗಳ ವಿಕೋಪಕ್ಕೆ ತಿರುಗಿ, ರಾತ್ರಿ ಸುಮಾರು 2:30ರ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ರೆಹಮಾನ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಗುಜರಾತ್ ಮತ್ತು ಹರಿಯಾಣ ಎಸ್‌ಟಿಎಫ್‌ (STF) ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದವು. ಈತನ ಮೊಬೈಲ್‌ನಲ್ಲಿ ರಾಮಮಂದಿರಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು ಹಾಗೂ ನಕ್ಷೆಗಳು ಪತ್ತೆಯಾಗಿದ್ದವು. ಪ್ರಸ್ತುತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಭದ್ರತಾ ಲೋಪದ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು