4:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ?

25/05/2021, 13:57

ಮುಂಬಾಯಿ (Reporter Karnataka News)

ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ ತನ್ನ ವ್ಲಾಗ್(vlog)ನಲ್ಲಿ ಬಳಸಿದ ಒಂದು ಶಬ್ದದಿಂದಾಗಿ ಕಾಂಟ್ರೊವರ್ಸಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಹೌದು, ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿ ಇರುವ ಯುವಿಕಾ ಚೌಧರಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದು, ಇದರಲಿ ಅವರ ಪತಿ ಪ್ರಿನ್ಸ್ ಹೇರ್ ಕಟ್ಟಿಂಗ್ ಮಾಡಿಸಿಕೊಳ್ಳುತ್ತಿದ್ದು, ಯುವಿಕಾ ಮಾತಾಡುತ್ತಾ “ನಾನೂ ಯಾವಾಗಲೂ ಬಂದು ಭಂಗಿಯರ ಹಾಗೆ ನಿಂತುಕೊಳ್ಳುತ್ತೇನೆ” ಎನ್ನುವ ವಾಕ್ಯವನ್ನು ಬಳಸಿಕೊಂಡಿದ್ದಾರೆ.

ಇದು ಅನೇಕ ಮಂದಿಯ ಕೋಪವನ್ನು ನೆತ್ತಿಗೇರಿಸಿದ್ದು ಇದು ಜಾತೀಯತೆಯನ್ನು ಹಾಗೂ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ನೈರ್ಮಲ್ಯ ಕೆಲಸವನ್ನು ಮಾಡುವ ಸಮುದಾಯವನ್ನು ತನ್ನ ವಿಡಿಯೋದಲ್ಲಿ ನಿಂದಿಸಿದ್ದಾರೆ ಎಂದು ನೆಟ್ಟಿಗರು ಗರಂ ಆಗಿದ್ದು, ಈಗ #ArrestYuvikaChoudhary ಟ್ಯಾಗ್ ಟ್ರೆಂಡ್ ಆಗ್ತಾ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು