9:03 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ

23/09/2024, 22:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.
ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.
ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು