5:25 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ

23/09/2024, 22:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.
ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.
ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು