9:40 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅರುಣಗಿರಿ ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಸಬ್ ಇನ್ಸ್ಪೆಕ್ಟರ್ ಶಿವನ್ ಗೌಡ ಮೆಚ್ಚುಗೆ

23/09/2024, 22:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.
ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.
ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು