12:49 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ: ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ

26/12/2024, 20:25

ಹಾವೇರಿ(reporterkarnataka.com): ಮಹಾತ್ಮ ಗಾಂಧಿ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್ ಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ ಗೂ ನಕಲಿ ಕಾಂಗ್ರೆಸ್ ಗೂ ವ್ಯತ್ಯಾಸ ಇದೆ.ಮಹಾತ್ಮ ಗಾಂಧೀಜಿಯವರ
ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲಾ ಇಲಾಖೆಗಳು, ನಿಗಮಗಳಲ್ಲಿ ಭ್ರಷ್ಟಾಚಾರ ನಡೆದಿದೆ. ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಯವರ ಸ್ವರಾಜ್ಯಕ್ಕೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರದ ಹಣ ಬಳಸುತ್ತಿರುವುದು ಎಷ್ಟು ಸರಿ? ಇದು ಯಾವ ಕಾನೂನಿನಲ್ಲಿದೆ? ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸುವುದು ಎಷ್ಟರ ಮಟ್ಟಿಗೆ ಸರಿ? ಗಾಂಧೀಜಿಯವರನ್ನು ಮುಂದಿಟ್ಟುಕೊಂಡು ತಮ್ಮ ಬ್ಯಾನರ್ ಹಾಕಿಕೊಂಡು ಅಧಿವೇಶನ ಮಾಡುತ್ತಿದ್ದಾರೆ. ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
*ಪ್ರಜಾಪ್ರಭುತ್ವ ವಿರೋಧಿ ಕ್ರಮ;* ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರದ ಮದದಿಂದ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದ್ದಾರೆ. ಇಂಥ ಪ್ರಕರಣಗಳು ಸಾಕಷ್ಟು ನಡೆದಿದೆ, ಆದರೆ ಇನ್ನೂ ಕೆಲವು ಪ್ರಕರಣ ಬೆಳಕಿಗೆ ಬಂದಿಲ್ಲ. ಸರಕಾರ ಪೊಲೀಸ್ ಸ್ಟೇಷನ್ ಗಳಲ್ಲಿ ಡೀಲ್ ವ್ಯವಸ್ಥೆ ಮಾಡಿದೆ. ಗೃಹ ಸಚಿವರೇ ಏನೂ ನಡೆದಿಲ್ಲ, ಗೊತ್ತಿಲ್ಲ ಅಂತ ಮಾತಾಡುತ್ತಾರೆ. ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ಘಟನೆಗಳು ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಶಾಸಕ ಮುನಿರತ್ನ ಮೇಲೆ ಆರೋಪ ಇದೆ , ಅದನ್ನು ಕೋರ್ಟ್ ನಲ್ಲಿ ಅವರು ಎದುರಿಸುತ್ತಾರೆ. ಅವರ ಮೇಲೆ ಮೊಟ್ಟೆ ಒಗೆಯುತ್ತಾರೆ ಅಂದರೆ ಯಾವ ಮಟ್ಟಕ್ಕೆ ಸರ್ಕಾರ ಇಳಿದಿದೆ? ಜನ ಪ್ರತಿನಿಧಿಗಳು ನಿರ್ಭೀತಿ, ನಿರ್ಭಯದಿಂದ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಮುನಿರತ್ನ ನಾಟಕ‌ ಮಾಡುತ್ತಿದ್ದಾರೆಂಬ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಉಂಟಾ? ನಮ್ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನ ಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.
*ಸಿಟಿ ರವಿ ದೂರಿಗೆ ಕ್ರಮವಿಲ್ಲ:*
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಗೆ ಧರ್ಮಸ್ಥಳಕ್ಕೆ ಬರಲಿ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಅದು ಅವರವರಿಗೆ ಬಿಟ್ಟಿದ್ದು ದೇವರು ನಂಬಿಕೆ ಅವರವರ ವೈಯಕ್ತಿಕ ವಿಚಾರ. ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರೂ ದೂರು ಕೊಟ್ಟಿದ್ದಾರೆ. ಒಂದು ಕಡೆ ಕಂಪ್ಲೇಂಟ್ ಗೆ ಕೂಡಲೇ ಕ್ರಮ ಕೈಗೊಳ್ಳುತ್ತಾರೆ. ಆದರೆ, ಸಿ.ಟಿ ರವಿ ದೂರು ಕೊಟ್ಟಿರುವುದನ್ನು ಎಫ್ ಐ ಆರ್ ಮಾಡೇ ಇಲ್ಲ. ಹೈಕೋರ್ಟ್ ಮದ್ಯಪ್ರವೇಶ ಮಾಡದಿದ್ದರೆ ಸಿ.ಟಿ ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ ಎಂದರು.
*ದರ ಏರಿಕೆ ಪರ್ವ:*
ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಡಾಂಪ್ ಡ್ಯೂಟಿ, ಅಬಕಾರಿ ತೆರಿಗೆ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. 15,000 ಕೋಟಿ ರೂಪಾಯಿ ಹೊಸ ತೆರಿಗೆ ಹಾಕಿದ್ದಾರೆ. ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ. ಜನ ಸಾಮಾನ್ಯರು ಬಳಕೆ‌ ಮಾಡುವಂತ ಎಲ್ಲಾ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮರಳು, ಜಲ್ಲಿ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ತೆರಿಗೆ ಹಾಕುವ ಕಾಲ ದೂರ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು