8:15 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

11/05/2022, 19:41

ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು