1:40 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

11/05/2022, 19:41

ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು