12:35 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ

11/05/2022, 19:41

ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು