4:10 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ ಬಳಿಕ ಮನನೊಂದು ನೇಣಿಗೆ ಶರಣು

11/08/2022, 20:51

ಮೈಸೂರು(reporterkarnataka.com):ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದ ನವ ವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜತೆ ಪರಾರಿಯಾಗಿದ್ದು, ಪೊಲೀಸರಿಗೆ ಸಿಕ್ಕಿ ಬಿದ್ದ ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲಿ ನವವಧುವನ್ನುಪತ್ತೆ ಮಾಡಿ ಪ್ರಿಯಕರನಿಂದ ಬೇರ್ಪಡಿಸಿದ್ದರು.

ಪ್ರಿಯಕರನಿಂದ ದೂರವಾದರಿಂದ ಮನನೊಂದ ನವವಧು ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕು ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ವರ್ಷಿತಾ(20) ಮೃತಪಟ್ಟಿರುವ ನವವಧು. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಮಗಳ ಮನ ಒಲಿಸಿ ಚಾಮರಾಜನಗರದ ಯುವಕನೊಂದಿಗೆ ಮೇ 8 ರಂದು ಅದ್ಧೂರಿಯಾಗಿ ಆಕೆಯ ವಿವಾಹ ಮಾಡಿಕೊಡಲಾಗಿತ್ತು.

ಆಷಾಢ ಮಾಸ ಹಿನ್ನೆಲೆ ವರ್ಷಿತಾ ತವರು ಮನೆ ಕಾರ್ಯಕ್ರಮಕ್ಕೆ ಆಗಮಿಸಿದ್ದಳು. ಈ ವೇಳೆ ಪಕ್ಕದ ಮನೆಯಲ್ಲಿದ್ದ ಪ್ರಿಯತಮ ಕಿರಣ್ ಜತೆ ಮನೆ ಬಿಟ್ಟು ಪರಾರಿಯಾಗಿದ್ದಳು.

ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರೇಮಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಅವರ ಮನೆಗೆ ಕಳುಹಿಸಿದ್ದರು.

ನಂತರ ಆಕೆ ಮೈಸೂರಿನಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿ 3 ದಿನ ಕಳೆದು, ನಂತರ ರಾಂಪುರ ಗ್ರಾಮದಲ್ಲಿರುವ ತನ್ನ ತಾತನ ಮನೆಗೆ ಬಂದಿದ್ದಳು ಎನ್ನಲಾಗಿದೆ.

ಪ್ರಿಯಕರ ದೂರವಾಗಿದ್ದರಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು