9:52 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು