5:00 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು