11:55 PM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು