2:57 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ 

19/08/2021, 20:35

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐ‌ಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.

ನೊಂದವರಿಗೆ ಸಾಂತ್ವನ ಹೇಳುವ ಜತೆಗೆ ಆಹಾರದ ಕಿಟ್, ಹಾಸಿಗೆ, ಬಟ್ಟೆ, ಪಾತ್ರೆ ಪಗಡೆ ಸೇರಿದಂತೆ ಎಲ್ಕ ಅಗತ್ಯ ಗೃಹಬಳಕೆ ಸಾಮಗ್ರಿಗಳನ್ನು ನೀಡಿದ್ದಾರೆ. ಕೂಡಲೇ ತಾತ್ಕಾಲಿಕ ಶೆಡ್ ನಿರ್ಮಿಸಿಕೊಳ್ಳಲು ಬೇಕಾಗುವ ಸಲಕರಣೆಗಳನ್ನು ಕೂಡ ಒದಗಿಸಿದ್ದಾರೆ. ಈ ಮೂಲಕ ನಿರಾಶ್ರಿತರಿಗೆ ತುರ್ತು ಆಶ್ರಯ ವ್ಯವಸ್ಥೆ ಮಾಡಿ ವೀಣಾ ಅವರು ಮಾನವೀಯತೆ ಮೆರೆದಿದ್ದಾರೆ. 

ಇಷ್ಟೇ ಅಲ್ಲದೆ ನೊಂದ ಕುಟುಂಬಗಳ ಆಹುವಾಲಗಳನ್ನು ಸ್ವೀಕರಿಸಿದ್ದು, ಕಂದಾಯ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕುವಂತೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.

ಡಾ. ಮಹಾಂತೇಶ್ ಚರಂತಿಮಠ, ಕೆಪಿಸಿಸಿ ವೈದ್ಯ ಘಟಕದ ಉಪಾಧ್ಯಕ್ಷರಾದ ಡಾ. ಕವಿತಾ ವಾಗೀಶ್, ಮಾಜಿ ಪುರಸಭೆ ಅಧ್ಯಕ್ಷ ದಾದಾಪೀರ್ ಮಕರಬ್ಬಿ, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಿ. ಮಂಜುನಾಥ್, ಹರಪನಹಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಪ್ರಜ್ವಲ್, ಅರುಣ್ ಕುಮಾರ್, ಮದನ್ ಸ್ವಾಮಿ, ಸಾಗರ್ ಪಾಟೀಲ್, ಗುರು ಬಸವರಾಜ್, ಜೆ.ಕೆ.ಮಾರುತಿ, ರೂಪಾ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು