2:01 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

29/05/2024, 21:00

ಬೆಂಗಳೂರು(reporterkarnataka.com): ಸಂಸದ ಹಾಗೂ ಜನತಾದಳದಿಂದ ಅಮಾನತುಗೊಂಡ ನಾಯಕ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಲೈಂಗಿಕ ಕಿರುಕುಳದ 2,900 ಕ್ಕೂ ಹೆಚ್ಚು ವೀಡಿಯೋಗಳ ನಂತರ ದೇಶದಿಂದ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ನ್ಯಾಯಾಲಯ ಬುಧವಾರ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳುತ್ತಿದ್ದಂತೆ ಅವರನ್ನು ಬಂಧಿಸಲು ತನಿಖಾ ಸಂಸ್ಥೆ ಯೋಜಿಸಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಮರಳುವುದಾಗಿ ಸೋಮವಾರ ವಿಡಿಯೋ ಬಿಡುಗಡೆ ಮಾಡಿದ್ದರು. ಸಂಸದರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಈ ಹಿಂದೆ ಕೇಂದ್ರಕ್ಕೆ ಪತ್ರ ಬರೆದಿತ್ತು.
ಏಪ್ರಿಲ್ 28 ರಂದು, ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹೆಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 354A (ಲೈಂಗಿಕ ಕಿರುಕುಳ), 354D (ಹಿಂಬಾಲಿಸುವಿಕೆ), 506 (ಅಪರಾಧ ಬೆದರಿಕೆ), ಮತ್ತು 509 (ಮಹಿಳೆಗೆ ಅವಮಾನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು