8:50 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ

18/09/2024, 13:17

ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ಸತತ 7 ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಪಡೆದಿದೆ.

ಪಂದ್ಯದ ಒಂಬತ್ತನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಗೋಲು ಗಳಿಸಲು ಅವಕಾಶ ಸಿಕ್ಕಿತು, ಆದರೆ ಚೀನಾದ ರಕ್ಷಣಾತ್ಮಕ ಆಟದಿಂದ ಅದು ಸಾಧ್ಯವಾಗಲಿಲ್ಲ. 10ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಾಗ ನಾಯಕ ಹರ್ಮನ್‌ಪ್ರೀತ್ ಗೋಲ್​ ಗಳಿಸಲು ವಿಫಲರಾದರು. ಹೀಗಾಗಿ ವಿರಾಮದ ವೇಳೆಗೆ ಸ್ಕೋರ್‌ಲೈನ್ 0-0 ಆಗಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣಕಾರಿ ಆಟವಾಡಿತು. ಆದರೆ, ಗೋಲು ಗಳಿಸಲು ಯಶಸ್ವಿಯಾಗಲಿಲ್ಲ. ಅಂತಿಮವಾಗಿ 51ನೇ ನಿಮಿಷದಲ್ಲಿ ಜುಗ್​ರಾಜ್ ಸಿಂಗ್ ಗೋಲು ಬಾರಿಸಲು ಯಶಸ್ವಿಯಾದರು. ಟೂರ್ನಿಯ ಮೊದಲ ಪಂದ್ಯದಲ್ಲಿ ಇದೇ ಚೀನಾವನ್ನು 3-0 ಗೋಲುಗಳಿಂದ ಭಾರತ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು