5:00 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ

18/09/2024, 13:17

ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ಸತತ 7 ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಪಡೆದಿದೆ.

ಪಂದ್ಯದ ಒಂಬತ್ತನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಗೋಲು ಗಳಿಸಲು ಅವಕಾಶ ಸಿಕ್ಕಿತು, ಆದರೆ ಚೀನಾದ ರಕ್ಷಣಾತ್ಮಕ ಆಟದಿಂದ ಅದು ಸಾಧ್ಯವಾಗಲಿಲ್ಲ. 10ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಾಗ ನಾಯಕ ಹರ್ಮನ್‌ಪ್ರೀತ್ ಗೋಲ್​ ಗಳಿಸಲು ವಿಫಲರಾದರು. ಹೀಗಾಗಿ ವಿರಾಮದ ವೇಳೆಗೆ ಸ್ಕೋರ್‌ಲೈನ್ 0-0 ಆಗಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣಕಾರಿ ಆಟವಾಡಿತು. ಆದರೆ, ಗೋಲು ಗಳಿಸಲು ಯಶಸ್ವಿಯಾಗಲಿಲ್ಲ. ಅಂತಿಮವಾಗಿ 51ನೇ ನಿಮಿಷದಲ್ಲಿ ಜುಗ್​ರಾಜ್ ಸಿಂಗ್ ಗೋಲು ಬಾರಿಸಲು ಯಶಸ್ವಿಯಾದರು. ಟೂರ್ನಿಯ ಮೊದಲ ಪಂದ್ಯದಲ್ಲಿ ಇದೇ ಚೀನಾವನ್ನು 3-0 ಗೋಲುಗಳಿಂದ ಭಾರತ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು