7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ

18/09/2024, 13:17

ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ಸತತ 7 ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಪಡೆದಿದೆ.

ಪಂದ್ಯದ ಒಂಬತ್ತನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಗೋಲು ಗಳಿಸಲು ಅವಕಾಶ ಸಿಕ್ಕಿತು, ಆದರೆ ಚೀನಾದ ರಕ್ಷಣಾತ್ಮಕ ಆಟದಿಂದ ಅದು ಸಾಧ್ಯವಾಗಲಿಲ್ಲ. 10ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಾಗ ನಾಯಕ ಹರ್ಮನ್‌ಪ್ರೀತ್ ಗೋಲ್​ ಗಳಿಸಲು ವಿಫಲರಾದರು. ಹೀಗಾಗಿ ವಿರಾಮದ ವೇಳೆಗೆ ಸ್ಕೋರ್‌ಲೈನ್ 0-0 ಆಗಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣಕಾರಿ ಆಟವಾಡಿತು. ಆದರೆ, ಗೋಲು ಗಳಿಸಲು ಯಶಸ್ವಿಯಾಗಲಿಲ್ಲ. ಅಂತಿಮವಾಗಿ 51ನೇ ನಿಮಿಷದಲ್ಲಿ ಜುಗ್​ರಾಜ್ ಸಿಂಗ್ ಗೋಲು ಬಾರಿಸಲು ಯಶಸ್ವಿಯಾದರು. ಟೂರ್ನಿಯ ಮೊದಲ ಪಂದ್ಯದಲ್ಲಿ ಇದೇ ಚೀನಾವನ್ನು 3-0 ಗೋಲುಗಳಿಂದ ಭಾರತ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು