4:58 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು