7:15 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಆ್ಯಸಿಡ್ ದಾಳಿಗೊಳಗಾದ ಹೆಣ್ಮಕ್ಕಳ ಪರವಾಗಿ ನಿಂತ ರಾಜ್ಯ ಸರಕಾರ: ನಿವೇಶನ, 10 ಸಾವಿರ ಮಾಸಾಶನ ಘೋಷಿಸಿದ ಸಿಎಂ

14/05/2022, 09:27

ಬೆಂಗಳೂರು(reporterkarnataka.com): ಆ್ಯಸಿಡ್  ದಾಳಿಗೊಳಗಾದ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. 

ಸ್ವ ಉದ್ಯೋಗ ಕೈಗೊಳ್ಳುವವರಿಗೆ 5 ಲಕ್ಷ ಸಹಾಯ ಧನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಹೆಲೋ ಸಚಿವರೇ ಸಹಾಯವಾಣಿಗೆ ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದಮ್ಮ ಅಕ್ಕ-ತಂಗಿಯರ ಬದುಕು ಬಹಳ ಕಷ್ಟ. ಅವರು ಮಾನಸಿಕವಾಗಿ ಹೇಗೆ ತಡೆದುಕೊಳ್ಳುತ್ತಾರೋ ಅನ್ನುವಂತದ್ದು ನನಗೆ ಬರೀ ಯೋಚನೆ ಮಾಡಿದ್ರೇ ದುಖವಾಗಲಿದೆ. ಬರೀ ನಮ್ಮ ಕಣ್ಣಲ್ಲಿ ಏನಾದ್ರೂ ಹೋದ್ರೆ ಚಡಪಡಿಸುತ್ತೇವೆ. ಸಣ್ಣ ದೂಳಿನ ಕಣ ಹೋದ್ರೆ ನೋವು ಪಡೆಯುತ್ತೇವೆ ಎಂದರು.

ಆ್ಯಸಿಡ್  ದಾಳಿಗೊಳಗಾದ ಅನೇಕರು ಕಣ್ ಕಳೆದುಕೊಂಡಿದ್ದಾರೆ. ಆಹಾರ ಸೇವಿಸೋದಕ್ಕೆ ಆಗೋದಿಲ್ಲ. ಊಟ ಸೇರೋದಿಲ್ಲ. ಉಸಿರಾಡೋದಕ್ಕೂ ಸಮಸ್ಯೆ. ಹೀಗೆ ದಾಳಿಗೊಳಗಾದಂತ ಅನೇಕರನ್ನು ಭೇಟಿಯಾಗಿದ್ದೇನೆ. ಪುರುಷ ಪ್ರಧಾನ ಸಮಾಜ ಅವರನ್ನು ರಕ್ಷಣೆ ಮಾಡಬೇಕು. ದಾಳಿಗೆ ಒಳಗಾಗಿದ್ದರೂ ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬದುಕಿನ ಬಗ್ಗೆ ಎಷ್ಟು ಆತ್ಮಸ್ಥೈರ್ಯ ಇರಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು