7:06 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ: ಸೆಪ್ಟೆಂಬರ್ 15ರಂದು ಬೆಳ್ಳಿತೆರೆಗೆ

18/08/2023, 13:37

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಗರದ ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು.
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಚಿತ್ರದ ಪೋಸ್ಟರ್ ಅನ್ನು ಹಾಗೂ ಇನ್ನೋರ್ವ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಇವರು ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.


ನಿರ್ಮಾಪಕ ಲುವಿಸ್ ಜೆ. ಪಿಂಟೊ ಪ್ರಸ್ತಾವಿಕವಾಗಿ ಮಾತನಾಡಿ, ‘’ಅದ್ದೂರಿಯಾಗಿ ನಿರ್ಮಾಣವಾದ ಚಿತ್ರದಲ್ಲಿ ಸಿನೆಮಾಕ್ಕೆ ಪೂರಕವಾದ ಎಲ್ಲಾ ಅಂಶಗಳಿದ್ದರೂ ಕೇವಲ ಸಿನೆಮಾವಾಗಿ ನಾವಿದನ್ನು ನಿರ್ಮಿಸಿಲ್ಲ. ಕೊಂಕಣಿ ಅಸ್ಮಿತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಲು ‘ಚಲನಚಿತ್ರದಿಂದ ಚಳುವಳಿವರೆಗೆ’ ಎಂಬ ಉದ್ದೇಶವಿಟ್ಟು ಕೆಲಸ ಮಾಡಿದ್ದೇವೆ’’ ಎಂದು ಮಾಹಿತಿ ನೀಡಿದರು.
ಪ್ರೇಮದ ಮೂಲಕ, ಕೊಂಕಣಿ ಅಸ್ಮಿತೆಯ ಹುಡುಕಾಟದ ಬಗ್ಗೆ ಎರಿಕ್ ಒಝೇರಿಯೊ ಬರೆದ ಮೂಲಕತೆಯನ್ನು, ಜೊಯೆಲ್ ಪಿರೇರಾ ಚಿತ್ರಕತೆಯಾಗಿ ರಚಿಸಿದ ಈ ಸಿನೆಮಾಕ್ಕೆ ವಿಲಾಸ್ ರತ್ನಾಕರ್ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸಿನೆಮಾಟೊಗ್ರಾಫಿ, ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ, ಎರಿಕ್ ಒಝೇರಿಯೊ ಸಂಗೀತ ನೀಡಿದ್ದಾರೆ. ಡೆನಿಸ್ ಮೊಂತೇರೊ, ಆಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಸಾಯಿ ಪನಂದಿಕಾರ್, ಪ್ರಿನ್ಸ್ ಜೇಕಬ್, ನೆಲ್ಲು ಪೆರ್ಮನ್ನೂರ್, ಸ್ಟ್ಯಾನಿ ಆಲ್ವಾರಿಸ್, ಗೌರೀಶ್ ವೆರ್ಣೆಕರ್, ಸುನೀಲ್ ಸಿದ್ದಿ ಮತ್ತಿತರರು ಪ್ರಮುಖ ಭೂಮಿಕೆಯಲ್ಲಿರುವ ಈ ಸಿನೆಮಾವು ಸೆಪ್ಟೆಂಬರ್ 15 ರಿಂದ ದಕ್ಷಿಣ ಕನ್ನಡ, ಉಡುಪಿಯ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ. ಮುಂದಿನ ದಿನಗಳಲ್ಲಿ ದೇಶ ಮತ್ತು ವಿದೇಶದ ಇತರೆಡೆ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು